ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ಈಗಾಗಲೇ ಜಾರಿಗೆ ತಂದಿರುವ ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ 14ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಿದೆ. ಅದರಂತೆ ಈಗ 14ನೇ ಕಂತಿನ ಹಣ ಜಮಾ ಆದ ನಂತರ 15ನೇ ಕಂತಿನ ಸರದಿ ಪ್ರಾರಂಭವಾಗುತ್ತದೆ. ಸರ್ಕಾರವು ಹೊಸ ಬದಲಾವಣೆಯನ್ನು 15ನೇ ಕಂತಿನ ಹಣ ಪಾವತಿ ಮಾಡುವಾಗ ಜಾರಿಗೆ ತರಲು ನಿರ್ಧರಿಸಿದೆ. ಆದರೆ 15ನೇ ಕಂತಿನಲ್ಲಿ ಯಾವ ಬದಲಾವಣೆ ಮಾಡಲಿದೆ ಎಂಬುದರ ಮಾಹಿತಿಯನ್ನು ನಿಮಗೆ ಈ ಲೇಖನದಲ್ಲಿ ತಿಳಿಸಲಾಗುತ್ತದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆ :
ಭಾರತೀಯ ರೈತರಿಗಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ರೈತರ ಖಾತೆಗೆ ಹಣವನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರವು 2018 ಡಿಸೆಂಬರ್ 1ನೇ ತಾರೀಖಿನಿಂದ ಪ್ರಾರಂಭಿಸಿತು. ಪ್ರತಿ ವರ್ಷ ಈ ಯೋಜನೆಯ ಅಡಿಯಲ್ಲಿ ಅರ್ಹ ರೈತರಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಮೂರು ಕಂತುಗಳಲ್ಲಿ ಹಣವನ್ನು ವರ್ಗಾಯಿಸಲಾಗುತ್ತದೆ.
2023 -24ನೇ ಸಾಲಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆ :
ಅರ್ಹ ರೈತರಿಗೆ 2023 23ನೇ ಸಾಲಿನಲ್ಲಿ ಆರ್ಥಿಕ ನೆರವನ್ನು ನೀಡಲು ಕೇಂದ್ರ ಸರ್ಕಾರವು ವರ್ಷಕ್ಕೆ ಆರು ಸಾವಿರ ರೂಪಾಯಿಗಳನ್ನು 2,000 ಗಳಂತೆ ಮೂರು ಸಮಾನ ಕಂತುಗಳಲ್ಲಿ ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದೆ. ಆದಾಯದ ಮಿತಿಗಿಂತ ಹೆಚ್ಚಿನ ರೈತರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ. ಈ ಯೋಜನೆಯ ಮುಖ್ಯ ಉದ್ದೇಶ ರೈತರ ಆರ್ಥಿಕ ಸ್ಥಿತಿಯನ್ನು ಸರ್ಕಾರದ ಮಟ್ಟದಲ್ಲಿ ಬಲಪಡಿಸುವ ಪ್ರಯತ್ನವಾಗಿದೆ. ರೈತರಿಗೆ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಆರ್ಥಿಕ ನೆರವನ್ನು ನೀಡುತ್ತದೆ, ಇದರಿಂದ ರೈತರು ಕೃಷಿಯಲ್ಲಿ ಹೆಚ್ಚಿನ ಹೂಡಿಕೆಯನ್ನು ಮಾಡಬಹುದು. ಹೆಚ್ಚಿನ ಆದಾಯವನ್ನು ಗಳಿಸಬಹುದಾಗಿದೆ ಹಾಗೂ ಫಲಾನುಭವಿಗಳಿಗೆ ಯೋಜನೆಯ ಅಡಿಯಲ್ಲಿ ಮೂರು ಬಾರಿ ವರ್ಷಕ್ಕೆ ಠೇವಣಿ ಮೊತ್ತವನ್ನು ನೀಡಲಾಗುತ್ತದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಅಗತ್ಯವಿರುವ ದಾಖಲೆಗಳು :
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ರೈತರು ಹೊಂದಿರಬೇಕಾಗುತ್ತದೆ ಅವುಗಳೆಂದರೆ ,ಆಧಾರ್ ಕಾರ್ಡ್, ಮೊಬೈಲ್ ನಂಬರ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ,ವಿಳಾಸಪುರವೇ, ಜಾತಿ ಪ್ರಮಾಣ ಪತ್ರ, ಸ್ವಯಂ ಘೋಷಣೆ ಪ್ರಮಾಣ ಪತ್ರ ,ಪಾಸ್ಪೋರ್ಟ್ ಸೈಜ್ ಫೋಟೋ, ಸಾಗುವಳಿ ಭೂಮಿಯ ಎಲ್ಪಿಸಿ ಪ್ರಮಾಣ ಪತ್ರ, ಸಾಗುವಳಿ ಭೂಮಿಯ ತಾಜಾ ಬಾಡಿಗೆ ರಶೀದಿ ,ಸಾಗುವಳಿ ಮಾಡಬಹುದಾದ ಭೂಮಿಯ ಎಲ್ಲಾ ಸ್ವಯಂ ದಾಖಲೆಗಳ ದೃಢೀಕರಣ ನಕಲು ಪ್ರತಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಹೊಂದಿರಬೇಕಾಗುತ್ತದೆ.
ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಪಿಎಂ ಕಿಸಾನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ರೈತರು ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ. ಕೇಂದ್ರ ಸರ್ಕಾರದ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. ತಮ್ಮ ಹೆಸರನ್ನು ನೋಂದಾಯಿಸಿಕೊಂಡ ನಂತರ ಅರ್ಹ ರೈತರಿಗೆ ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೆರವಾಗಿ ಜಮಾ ಮಾಡಲಾಗುತ್ತದೆ. ಪಿಎಂ ಕಿಸಾನ್ ಯೋಜನೆಗೆ ಆನ್ಲೈನ್ ಮೂಲಕ ರೈತರು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಹೀಗೆ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಲು 2023- 24 ನೇ ಸಾಲಿನಲ್ಲಿ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಕಿಸಾನ್ ಸಮ್ಯಾನ್ ಯೋಜನೆಯ ಹಣವನ್ನು ಪಡೆಯಲು ರೈತರಿಗೆ ಈ ಮಾಹಿತಿಯನ್ನು ಶೇರ್ ಮಾಡಿ. ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಹಕರಿಸಿ ಧನ್ಯವಾದಗಳು.