ನಮಸ್ಕಾರ ಸ್ನೇಹಿತರೆ ಈ ಬಾರಿ ರಾಜ್ಯದಲ್ಲಿ ಮತದಾರರ ನಿರೀಕ್ಷೆಯಂತೆ ರಾಜ್ಯ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿರುವುದರ ಬಗ್ಗೆ ಈಗಾಗಲೇ ನಾವು ನೋಡಿದ್ದೇವೆ. ಅಲ್ಲದೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಹಲವಾರು ಸೌಲಭ್ಯಗಳನ್ನು ನೀಡುವುದಾಗಿ ಭರವಸೆಗಳನ್ನು ನೀಡಿತ್ತು. ಅದರಲ್ಲಿ ಈಗ ಉಚಿತ ಬಸ್ ಸೇವೆ ಮಹಿಳೆಯರಿಗೆ ಒದಗಿಸುವ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಹೆಚ್ಚಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಈ ಯೋಜನೆಯ ಬಗ್ಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿದ್ದು ಸಾರ್ವಜನಿಕ ಸಾರಿಗೆ ಸರ್ಕಾರಿ ಬಸ್ ನ ಪ್ರಯಾಣಕ್ಕೆ ಈ ಯೋಜನೆಯಿಂದ ಒಟ್ಟು ನೀಡಿದಂತಾಗಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರವು ಶಕ್ತಿ ಯೋಜನೆಯ ಜೊತೆಗೆ ಮಹಿಳೆಯರಿಗಾಗಿ ಮತ್ತೊಂದು ಸಿಹಿಸಿದ್ದಿಯನ್ನು ನೀಡಲು ನಿರ್ಧರಿಸಿದೆ. ಹಾಗಾದರೆ ರಾಜ್ಯ ಸರ್ಕಾರದ ಮತ್ತೊಂದು ಸಿಹಿ ಸುದ್ದಿ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.
ಮಹಿಳೆಯರ ಹೆಚ್ಚಿದ ಪ್ರಯಾಣ :
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಕಷ್ಟು ಆಸಕ್ತಿಯನ್ನು ಮಹಿಳೆಯರು ತೋರಿಸುತ್ತಿದ್ದಾರೆ. ಹೋದ ವಾರದ ದಿನದಲ್ಲಿಯೂ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಹೆಚ್ಚಿನ ಪ್ರಯಾಣವನ್ನು ಮಹಿಳೆಯರು ಮಾಡಿದ್ದಾರೆ. ಇನ್ನೂ ಗ್ರಾಮೀಣ ಭಾಗದ ಸ್ಥಳಗಳಲ್ಲಿ ಹೆಚ್ಚು ಬಸ್ಗಳ ಸೌಲಭ್ಯವನ್ನು ನೀಡುವುದರ ಮೂಲಕ ಸರ್ಕಾರಿ ಬಸ್ ನಲ್ಲಿ ಸಂಚರಿಸುವಂತೆ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಈ ಯೋಜನೆಯಿಂದ ಸರ್ಕಾರಿ ಬಸ್ ನ ಪ್ರಯಾಣಕ್ಕೆ ಹೆಚ್ಚು ಹೊತ್ತು ನೀಡಿದೆ ಹಾಗೂ ಆರ್ಥಿಕ ಬೆಂಬಲವನ್ನು ಮಹಿಳೆಯರಿಗೂ ಸಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಹೊಸ ಬಸ್ಗಳ ಖರೀದಿ :
ಶಕ್ತಿ ಯೋಜನೆಯ ಅಡಿಯಲ್ಲಿ ಹಲವಾರು ಮಹಿಳೆಯರಿಗೆ ಹೆಚ್ಚಿನ ಸಹಾಯವಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಇನ್ನು ಕೆಲವೊಂದಿಷ್ಟು ಕಡೆ ಸರ್ಕಾರಿ ಬಸ್ಗಳ ಸೌಲಭ್ಯ ಇಲ್ಲದ ಕಾರಣ ಈ ಬಗ್ಗೆ ವಿಧಾನಸೌಧದಲ್ಲಿ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಇನ್ನು ಹೊಸ ಬಸ್ ಗಳನ್ನು ಹೆಚ್ಚು ಬಿಡುಗಡೆ ಮಾಡುವ ಹೊಣೆ ನಮ್ಮದು ಎಂದು ಹೇಳಿದ್ದಾರೆ. 4000 ಬಸ್ಗಳ ಖರೀದಿಯನ್ನು 4 ಸಾರಿಗೆ ನಿಗಮಗಳಿಂದ ಮಾಡಿದ್ದೇವೆ ಹಾಗೂ ಜಿಲ್ಲೆಯ 20 ಗ್ರಾಮಗಳಿಗೆ ಸರ್ಕಾರಿ ಬಸ್ ಇಲ್ಲದ ಕಾರಣ ಆ ಹಳ್ಳಿಗಳಿಗೆ ಬಸ್ಗಳನ್ನು ನೀಡುವ ವ್ಯವಸ್ಥೆಯನ್ನು ಕುರಿತು ಈ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕ್ರಮ ಕೈಗೊಳ್ಳಲಾಗುತ್ತದೆ :
ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ನಿಂದನೆ ಹಾಗೂ ಅಪಹಸ್ಯ ಮಾಡಿದರ ಕುರಿತಾಗಿ ಹಲವಾರು ಮಾಹಿತಿಗಳು ಸರ್ಕಾರಕ್ಕೆ ಕೇಳು ಬಂದಿದ್ದು ಇನ್ನು ಮುಂದೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಬಸ್ ಗಳನ್ನು ಬಸ್ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಉಚಿತವಾಗಿ ಮಹಿಳಾ ಪ್ರಯಾಣಿಕರು ಪ್ರಯಾಣಿಸುವ ಕುರಿತು ಅಪಹಾಸ್ಯ ಮಾಡುವುದು ಅನುಚಿತವಾಗಿ ಮಹಿಳೆಯರೊಂದಿಗೆ ವರ್ತಿಸುವುದು ಇಂತಹ ವಿಚಾರಗಳ ಬಗ್ಗೆ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಿಳಿಸಿದರು. ಈ ಯೋಜನೆಗಳನ್ನು ಮಹಿಳೆಯರ ಹೇಳಿಕೆಗಾಗಿ ಜಾರಿಗೆ ತಂದಿದ್ದು ಹಾಗಾಗಿ ಈ ಯೋಜನೆಯ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕಾಗುತ್ತದೆ ಎಂದು ಸಚಿವರು ಹೇಳಿದರು.
ಹೀಗೆ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಬಗ್ಗೆ ಅಪಹಸ್ಯವನ್ನು ಮಾಡುತ್ತಿರುವಂತಹ ವ್ಯಕ್ತಿಗಳಿಗೆ ರಾಜ್ಯ ಸರ್ಕಾರವು ಎಚ್ಚರಿಕೆಯನ್ನು ನೀಡಿದೆ. ಹಾಗಾಗಿ ಮಹಿಳೆಯರು ಯಾವುದೇ ಆತಂಕವಿಲ್ಲದೆ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು ಎಂದು ಹೇಳಬಹುದಾಗಿದೆ. ಹೀಗೆ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಬಗ್ಗೆ ಸರ್ಕಾರವು ಮಹಿಳೆಯರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಈ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು