Saturday, July 27, 2024
HomeNewsಕಡಿಮೆ ಜಮೀನು ಹೊಂದಿದ ರೈತರಿಗೆ ಅರ್ಜಿ ಆಹ್ವಾನ : ಒಂದು ಬಾರಿ ಮಾತ್ರ ಅವಕಾಶ

ಕಡಿಮೆ ಜಮೀನು ಹೊಂದಿದ ರೈತರಿಗೆ ಅರ್ಜಿ ಆಹ್ವಾನ : ಒಂದು ಬಾರಿ ಮಾತ್ರ ಅವಕಾಶ

ನಮಸ್ಕಾರ ಸ್ನೇಹಿತರೆ, ಜನರಿಗೆ ಇಂದು ಮಳೆಗಾಲದಲ್ಲಿಯೇ ಮಳೆ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಉಂಟಾಗಿದೆ ಎಂದು ಹೇಳಬಹುದಾಗಿದೆ. ಮಳೆಯ ಪ್ರಮಾಣವು ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ ಅದರಲ್ಲೂ ಇದೀಗ ಕೃಷಿಯನ್ನೇ ನಂಬಿ ಬದುಕುತ್ತಿದ್ದಂತಹ ಜನರಿಗೆ ಮಳೆ ಬರದೆ ತೀರಾ ಸಂಕಷ್ಟ ಉಂಟಾಗಿದೆ ಎಂದು ಹೇಳಬಹುದಾಗಿದೆ. ಹಾಗಾಗಿ ಇಂದು ಹಲವರು ತಂತ್ರಗಳನ್ನು ನೀರು ಸಂರಕ್ಷಣೆಗಾಗಿ ಬಳಸಿಕೊಳ್ಳಬೇಕಾಗಿದೆ. ಸರ್ಕಾರವು ಕೃಷಿಕರಿಗಾಗಿ ಹಲವಾರು ಸೌಲಭ್ಯಗಳನ್ನು ನೀಡಿದ್ದು ಇದೀಗ ಗ್ರಾಮೀಣ ಪ್ರದೇಶದಲ್ಲಿನ ಕೃಷಿಯ ರೈತರಿಗೆ ಹಾಗೂ ಕಡಿಮೆ ಜಮೀನು ಹೊಂದಿದವರಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡುತ್ತಿದೆ. ಹಾಗಾದರೆ ಆ ಯೋಜನೆ ಏನು ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುತ್ತದೆ.

ganga-kalyan-yojana-karnataka-application-invitation
ganga-kalyan-yojana-karnataka-application-invitation
Join WhatsApp Group Join Telegram Group

ಗಂಗಾ ಕಲ್ಯಾಣ ಯೋಜನೆ :

ಗ್ರಾಮೀಣ ಪ್ರದೇಶದ ರೈತರಿಗೆ ಹಾಗೂ ಕಡಿಮೆ ಜಮೀನು ಹೊಂದಿರುವ ರೈತರಿಗಾಗಿ ಸರ್ಕಾರವು ಬೋರ್ವೆಲ್ ಕೊರೆಸಲು ನಾಲ್ಕು ಲಕ್ಷ ರೂಪಾಯಿಗಳ ಸಹಾಯಧನಕ್ಕೆ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಆಹ್ವಾನ ಮಾಡಲಾಗಿದೆ. ಈ ಕೂಡಲೇ ರೈತರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ, ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ.

ಅರ್ಜಿ ಆಹ್ವಾನಿಸಲಾಗಿದೆ :

ಬೋರ್ವೆಲ್ ಕೊರಿಸಲು ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಸರ್ಕಾರವು ರೈತರಿಗೆ ಸಹಾಯಧನವನ್ನು ನೀಡಲಾಗುತ್ತಿದ್ದು ಇದಕ್ಕೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ರೈತರು ಸರ್ಕಾರದಿಂದ 4 ಲಕ್ಷ ರೂಪಾಯಿಗಳ ಸಹಾಯಧನವನ್ನು ಪಡೆಯಬಹುದಾಗಿದೆ. ಈ ಯೋಜನೆಯನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹೀಗೆ ಕೆಲವೊಂದು ಜಿಲ್ಲೆಗಳಲ್ಲಿ ಈ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನು ಓದಿ : ಬೆವರಿನಿಂದ ಕೆಟ್ಟ ವಾಸನೆ ಬರುತ್ತಿದೆಯೇ? ಕಾಳಜಿ ತೋರದಿದ್ದರೆ ಈ ರೋಗಗಳು ಕಾಡದೆ ಬಿಡುವುದಿಲ್ಲ.!

ಅರ್ಜಿಯನ್ನು ಸಲ್ಲಿಸಲು ಇರುವ ಅರ್ಹತೆಗಳು :

ರೈತರು ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. ರೈತರು ಗ್ರಾಮೀಣ ಪ್ರದೇಶದಲ್ಲಿರಬೇಕು. ಕುಟುಂಬದ ವಾರ್ಷಿಕ ಆದಾಯವು 68,000 ಕ್ಕಿಂತ ಕಡಿಮೆ ಇರಬೇಕು. ಅರ್ಜಿಯನ್ನು ಸಲ್ಲಿಸಲು ಅರ್ಜಿದಾರರ ವಯಸ್ಸು ಕನಿಷ್ಠ 18 ಹಾಗೂ ಗರಿಷ್ಟ 55 ವರ್ಷಗಳಾಗಿರಬೇಕು. ಅರ್ಜಿಯನ್ನು ಸಲ್ಲಿಸುವ ವಿಧಾನ : ರೈತರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸೇವಾ ಸಿಂಧು ಪೋರ್ಟಲ್ನ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯ ಜೊತೆಗೆ ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಯು ಸಹ ಇದ್ದು, ಈ ಯೋಜನೆಯ ತೆರೆದ ಭಾವಿ ಸೌಲಭ್ಯವನ್ನು ಕರಾವಳಿ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿನ ರೈತರಿಗೆ ಒದಗಿಸಲಾಗುತ್ತದೆ.

ಹೀಗೆ ರಾಜ್ಯ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿ ಈಗ ಗಂಗಾ ಕಲ್ಯಾಣ ಯೋಜನೆಯ ಸಹ ಆಗಿದೆ ಎಂದು ಹೇಳಬಹುದಾಗಿದೆ. ಹಾಗಾಗಿ ರೈತರು ಈ ಯೋಜನೆಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು. ಹೀಗೆ ಈ ಮಾಹಿತಿಯನ್ನು ನಿಮ್ಮೆಲ್ಲ ರೈತ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

LPG ಸೆಪ್ಟೆಂಬರ್ ಧಮಾಕ: ಮತ್ತೆ ಇಳಿಕೆ ಕಂಡ ಸಿಲಿಂಡರ್.!‌ ಈಗ ಕೇವಲ 428 ರೂ.ಗೆ ಗ್ಯಾಸ್ ಸಿಲಿಂಡರ್ ಹೇಗೆ ಗೊತ್ತಾ?

ಇನ್ನು 2 ವಾರ ಮಾತ್ರ.. ಆಧಾರ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments