ನಮಸ್ಕಾರ ಸ್ನೇಹಿತರೆ ಇಂದು ನಿಮಗೆ ತಿಳಿಸುತ್ತಿರುವುದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಯಾವಾಗ ಪ್ರಾರಂಭ ಎಂಬುದರ ಬಗ್ಗೆ ಕರ್ನಾಟಕ ರಾಜ್ಯದ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವ ವಿಷಯವಾಗಿದೆ. ಈ ಬಗ್ಗೆ ಈ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವುದು ಯಾವಾಗ, ಅರ್ಜಿ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳು ಯಾವುವು, ಈ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆ 2023 :
ಬೆಂಗಳೂರಿನಲ್ಲಿ ನಿನ್ನೆ ರಾಜ್ಯ ಬಜೆಟ್ ಮಂಡನೆಯಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇಂದು ಮಂಡಿಸಿರುವ ಬಜೆಟ್ ಪೂರ್ಣ ಪ್ರಮಾಣದ ಬಜೆಟ್ ಆಗಿದೆ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ರಾಜ್ಯದ ಮಹಿಳೆಯರು ಬಹು ನಿರೀಕ್ಷೆಯನ್ನು ಇಟ್ಟಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 16ರಂದು ಪ್ರಾರಂಭವಾಗುತ್ತದೆ ಹಾಗೂ ಸಾವಿರ ರೂಪಾಯಿಗಳು ಕುಟುಂಬದ ಯಜಮಾನನಿಗೆ ಆಗಸ್ಟ್ ನಲ್ಲಿ ನೇರವಾಗಿ dbt ಮೂಲಕ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ :
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳು ನಿಮಗೆ ಈ ಮೊದಲೇ ತಿಳಿಸಲಾಗಿದೆ ಅದರಂತೆಯೇ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸಿದರೆ ಬಗ್ಗೆಯೂ ಸಹ ಈ ಮೊದಲೇ ನಿಮಗೆ ತಿಳಿಸಲಾಗಿದ್ದು,ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಗ್ರಾಹಕರು 170ಗಳನ್ನು ಪಡೆಯಲು ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ಮೊದಲು ತಪ್ಪದೇ ತಮ್ಮ ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಯಾರೆಲ್ಲಾ ಅರ್ಹರು :
ಕರ್ನಾಟಕ ಸರ್ಕಾರವು ಘೋಷಿಸಿದಂತಹ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಯ ಸಹ ಒಂದಾಗಿದ್ದು ಈ ಯೋಜನೆಗೆ ಯಾರೆಲ್ಲಾ ಅರ್ಹರಿದ್ದಾರೆ ಎಂಬುದನ್ನು ನಿಮಗಿದೀಗ ತಿಳಿಸಲಾಗುತ್ತದೆ. ಜಿಎಸ್ಟಿ ಪಾವತಿ ಮಾಡುವ ಕುಟುಂಬಗಳು, ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಇದರಿಂದ ಅವರು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಗೃಹಲಕ್ಷ್ಮಿ ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಹಳ ಕಾತುರದಿಂದ ಕಾಯುತ್ತಿದ್ದರೆ ನಿಮಗೆ ಬೇಗ ಸಂತೋಷದ ಸುದ್ದಿಯನ್ನು ರಾಜ್ಯ ಸರ್ಕಾರವು ನೀಡಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಗೆ ಇನ್ನೂ ಕೆಲ ದಿನಗಳು ಮಾತ್ರ ಕಾಯಬೇಕಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿಯೂ ಸಹ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರವು ಅನುವು ಮಾಡಿಕೊಟ್ಟಿದೆ. ಇದರ ಜೊತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಲತಾಣಕ್ಕೆ ತೆರಳಿ ಗೃಹಲಕ್ಷ್ಮಿ ಯೋಜನೆಯನ್ನು ಆಯ್ಕೆ ಮಾಡಿ ಅದರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿದಾರರು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ಖಾತರಿ ಯೋಜನೆಗಳ ಜನತಾಣಕ್ಕೆ ಹೋದಾಗ ಅಲ್ಲಿ ಗೃಹಲಕ್ಷ್ಮಿ ಯೋಜನೆಯ ಡೆಮೋ ಅರ್ಜಿ ನಮೂನೆಯು ಕಾಣಿಸುತ್ತದೆ. ಈ ಡೆಮರ್ಜಿಯಲ್ಲಿ ನೀವು ಅರ್ಜಿ ನಮೂನೆಯನ್ನು ಹಾಕಲು ಸಾಧ್ಯವಾಗುವುದಿಲ್ಲ. ಏಕೆಂದರೆ ಇನ್ನೂ ಕೇಂದ್ರ ಸರ್ಕಾರವು ಈ ಯೋಜನೆಗೆ ಅಧಿಕೃತವಾಗಿ ಘೋಷಣೆ ಮಾಡಿರದ ಕಾರಣ ಸಾಧ್ಯವಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಘೋಷಣೆ ಮಾಡಿದ ನಂತರವೇ ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ : 14ನೇ ಬಜೆಟ್ ಅನ್ನು ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :
ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಅರ್ಜಿ ನಮೂನೆಯಲ್ಲಿ ಮೊದಲು ಆಧಾರ್ ಕಾರ್ಡಿನ ದೃಢೀಕರಣವನ್ನು ಮೊದಲು ಮಾಡಬೇಕು ಅದಾದ ನಂತರವೇ ಅರ್ಜಿದಾರರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಲು ತಿಳಿಸುತ್ತದೆ. ಅವುಗಳೆಂದರೆ, ಅರ್ಜಿದಾರರ ಮನೆ ಯಜಮಾನಿಯ ಹೆಸರು, ವಿಳಾಸ, ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ನಂತಹ ಕೆಲವೊಂದು ಅನೇಕ ವಿವರಗಳನ್ನು ನೊಂದಣಿ ಮಾಡಬೇಕು. ಇವುಗಳ ಜೊತೆಗೆ ಪತಿ ಯ ಹೆಸರು ಹಾಗೂ ಅವರ ಆಧಾರ್ ಕಾರ್ಡ್ ನ ವಿವರಗಳನ್ನು ಸಹ ನೊಂದಣಿ ಮಾಡಬೇಕು.
ಹೀಗೆ ಈ ಎಲ್ಲಾ ವಿವರಗಳನ್ನ ನೊಂದಣಿ ಮಾಡಿದ ನಂತರವೇ ಕೊನೆಯಲ್ಲಿ ಐ ಅಗ್ರೀ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಿದ ನಂತರವೇ ನಿಮಗೆ ಅರ್ಜಿ ಸ್ವೀಕೃತಿಯ ಒಂದು ಪತ್ರ ದೊರೆಯುತ್ತದೆ. ಹೀಗೆ ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರವೇ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಯಬಹುದು.
ಹೀಗೆ ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಮಾಹಿತಿಯು ನಿಮಗೆಲ್ಲರಿಗೂ ಉಪಯೋಗವಾಗುತ್ತದೆ ಎಂದು ಭಾವಿಸುತ್ತೇನೆ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಬಂಧು ಮಿತ್ರರು ಹಾಗೂ ಮಹಿಳೆಯರಿಗೂ ಶೇರ್ ಮಾಡಿ ಧನ್ಯವಾದಗಳು.
ಗೃಹಲಕ್ಷ್ಮಿ ಯೋಜನೆ ಅರ್ಜಿ ಯಾವಾಗ ಆರಂಭ ?
ಆಗಸ್ಟ್ ತಿಂಗಳಲ್ಲಿ ಆರಂಭ
ಹಣ ಹೇಗೆ ವರ್ಗಾವಣೆ ಆಗಲಿದೆ ?
ಡಿಬಿಟಿ ಮೂಲಕ ವರ್ಗಾವಣೆ ಆಗಲಿದೆ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವಾಗ ?
ಜುಲೈ 16 ರಿಂದ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ
ಇದನ್ನು ಓದಿ : ಕರ್ನಾಟಕದ ಬಜೆಟ್ ನಲ್ಲಿ NEP ರದ್ದು ಮಾಡಿದ ಕಾಂಗ್ರೆಸ್ ಸರ್ಕಾರ