ನಮಸ್ಕಾರ ಸ್ನೇಹಿತರೆ, ಇಂದು ನಿಮಗೆ ತಿಳಿಸುತ್ತಿರುವುದು ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ. ಈ ಯೋಜನೆಗೆ ಸಂಬಂಧಿಸಿದಂತೆ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೆಲವೊಂದು ವಿಷಯಗಳ ಬಗ್ಗೆ ಸ್ಪಷ್ಟಪಡಿಸಿದರು. ಇದರ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.
ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ :
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದೇವಾಲಯದ ಹೊರಗೆ ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಈ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ಗಳನ್ನು ವಿನ್ಯಾಸಗೊಳಿಸಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಜರುಪಡಿಸಲಾಗುತ್ತದೆ ಮತ್ತು ಅದೇ ದಿನದಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಗಳನ್ನು ನಿಮ್ಮ ಮನೆಗಳಿಂದ ಮಾತ್ರವಲ್ಲದೆ ಸೈಬರ್ ಕೆಫೆಗಳು ಗ್ರಾಮವನ್ ಹಾಗೂ ಬಾಪೂಜಿ ಸೇವ ಕೇಂದ್ರಗಳಿಂದ ಸಹ ಸಲ್ಲಿಸಬಹುದು ಎಂದು ಹೇಳಿದ್ದು, ಆದಾಯ ಕ್ರೂರಿಕರಣಕ್ಕೆ ಸಮಯವನ್ನು ನಿಗದಿಪಡಿಸಲು ಸರ್ಕಾರ ಯೋಜನೆಯ ಅನುಷ್ಠಾನದಲ್ಲಿ ತಡಮಾಡುತ್ತಿದೆ ಎಂಬ ಆರೋಪಗಳನ್ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿರಾಕರಿಸಿದ್ದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಸರ್ವರ್ ಮೇಲಿನ ಲೋಡ್ ಗಳನ್ನು ತಡೆಗಟ್ಟುವ ಸಲುವಾಗಿ ಮಾತ್ರ ಸರ್ಕಾರ ಉದ್ಸುಕವಾಗಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಜಾರಿ :
ಮುಂದೆ ನಡೆಸಲಾಗುವ ಕ್ಯಾಬಿನೆಟ್ ಸಭೆಯ ನಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗುವ ದಿನಾಂಕವನ್ನು ಘೋಷಿಸಲಾಗುತ್ತದೆ. ನಂತರ ಫಲಾನುಭವಿಗಳ ಖಾತೆಗಳಿಗೆ ಆಗಸ್ಟ್ 17 ಅಥವಾ 18ರಿಂದ ಹಣವನ್ನು ಜಮಾ ಮಾಡಲು ಸರ್ಕಾರ ಪ್ರಾರಂಭಿಸುತ್ತದೆ ಎಂದು ಹೇಳಿದರು. ಅಲ್ಲದೆ ಯಾವುದೇ ಗಡುವನ್ನು ಅರ್ಜಿಗಳನ್ನು ಸಲ್ಲಿಸಲು ಇರುವುದಿಲ್ಲ ಇದು ನಿರಂತರ ಪ್ರಕ್ರಿಯೆ ಆಗಲಿದೆ ಎಂದು ಹೇಳುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಹಾಗೂ ಗೊಂದಲಗಳನ್ನು ದೂರ ಮಾಡಿದರು.
ಇದನ್ನು ಓದಿ : ಸರ್ಕಾರದಿಂದ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿಗೆ ಅಕ್ಕಿಗೆ ಹಣ ಕೊಡಲು ನಿರ್ಧಾರ
ಈ ಯೋಜನೆಯ ಅಡಿಯಲ್ಲಿ ಎಷ್ಟು ಫಲಾನುಭವಿಗಳು ಪ್ರಯೋಜನ ಪಡೆಯಬಹುದು :
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಈ ಗೃಹಲಕ್ಷ್ಮಿ ಯೋಜನೆಯ ಬೆಳಗಾವಿ ಗ್ರಾಮೀಣದಲ್ಲಿ ಸುಮಾರು 1012 ಮಹಿಳೆಯರು ಸೇರಿದಂತೆ 78 000ಕೋಟಿ ಅಷ್ಟು ಬಿಪಿಎಲ್ ಕುಟುಂಬಗಳಿರುವ ಮಹಿಳಾ ಮುಖ್ಯಸ್ಥರಿಗೆ ಈ ಪ್ರಯೋಜನವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಹೀಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಆರ್ಥಿಕ ನೆರವನ್ನು ಒದಗಿಸುವ ಕಾರ್ಯವನ್ನು ಹಿಂದಿನ ಕರ್ನಾಟಕ ಸರ್ಕಾರವು ಮಾಡುತ್ತಿರುವುದನ್ನು ನಾವು ನೋಡಬಹುದು. ಈ ಯೋಜನೆಯ ಲಾಭ ಪಡೆಯುವಂತೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರ ಮಹಿಳೆಯರಿಗೂ ಸಹ ತಿಳಿಸಿ ಧನ್ಯವಾದಗಳು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯಲ್ಲಿ ಸಲ್ಲಿಸಬಹುದು ?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಪ್ಲೇ ಸ್ಟೋರ್ ನಲ್ಲಿ ಲಭ್ಯ ಇರುವ ಅಪ್ಲಿಕೇಶನ್ ನಿಜಾನಾ ?
ಅಪ್ಲಿಕೇಶನ್ ಸುಳ್ಳು ಎಂಬ ಮಾಹಿತಿ ಬರುತ್ತಿದೆ
ಯೋಜನೆ ಹಣ ಯಾವಾಗ ಜಮಾ ಮಾಡುತ್ತಾರೆ ಎಂದು ತಿಳಿಸಿದ್ದಾರೆ
ಆಗಸ್ಟ್ 17 ಮತ್ತು 18ರಂದು ಎಂದು ತಿಳಿಸಿದ್ದಾರೆ
ಇದನ್ನು ಓದಿ : ವಿದ್ಯಾ ಧನ್ ವೇತನಕ್ಕೆ ಅರ್ಜಿ ಆಹ್ವಾನ ನೇರವಾಗಿ ಬ್ಯಾಂಕ್ ಖಾತೆಗೆ 10,000 ಬರಲಿದೆ