ನಮಸ್ಕಾರ ಸ್ನೇಹಿತರೇ ಕಾಂಗ್ರೆಸ್ ಪಕ್ಷವು ಚುನಾವಣೆಗೂ ಪೂರ್ವ ಘೋಷಿಸಿದ್ದ ಇದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಸಹ ಒಂದಾಗಿದ್ದು. ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜುಲೈ 19 ರಿಂದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಈಗ ರಾಜ್ಯ ಸರ್ಕಾರವು ಅರ್ಜಿಯನ್ನು ಗೃಹಲಕ್ಷ್ಮಿ ಯೋಜನೆಗೆ ಸಲ್ಲಿಸಿದಂತಹ ಮಹಿಳೆಯರು ರಾಜ್ಯ ಸರ್ಕಾರದ ಈ ಎರಡು ಹೊಸ ನಿಯಮಗಳನ್ನು ಪಾಲಿಸಲೇಬೇಕು. ಹಾಗಾದರೆ ರಾಜ್ಯ ಸರ್ಕಾರ ಹೊರಡಿಸಿದ ಈ ಎರಡು ಹೊಸ ರೂಲ್ಸ್ ಗಳು ಯಾವುವು ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ :
ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು ಮಹಿಳೆಯರು ಅರ್ಜಿಗಳನ್ನು ಗೃಹಲಕ್ಷ್ಮಿ ಯೋಜನೆಗೆ ಗ್ರಾಮವನ್, ಕರ್ನಾಟಕ ಒನ್ ,ಬೆಂಗಳೂರು ಒನ್ ಹಾಗೂ ಇತರ ಸೇವಾಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವುದರ ಮೂಲಕ ಪ್ರತಿ ತಿಂಗಳು ಮಹಿಳೆಯರು ಹಣವನ್ನು ರಾಜ್ಯ ಸರ್ಕಾರದಿಂದ ಪಡೆಯಬಹುದಾಗಿತ್ತು. ಕೇಂದ್ರದಲ್ಲಿರುವವರು ಹೆಚ್ಚಿನ ಹಣವನ್ನು ಇತ್ತೀಚಿಗೆ ಅರ್ಜಿ ಸಲ್ಲಿಸುವ ವಿಚಾರವಾಗಿ ಪಡೆಯುತ್ತಾರೆ ಎಂಬ ಮಾಹಿತಿಯು ಹರಡಿತ್ತು ಅಲ್ಲದೆ ಬಾಗಲಕೋಟೆಯ ಕೆಲವೊಂದು ಸೇವ ಕೇಂದ್ರಗಳಲ್ಲಿಯೂ ಸಹ ಕೆಲಸಗಾರರನ್ನು ಮಜಾ ಮಾಡಲಾಗಿತ್ತು. ಈ ಬಗ್ಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಶುಲ್ಕ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ ಹಾಗೆ ಸರ್ಕಾರವೇ ಸೇವಾ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಶುಲ್ಕವನ್ನು ನೀಡುತ್ತದೆ ಹಾಗಾಗಿ ಅರ್ಜಿಯನ್ನು ಸಲ್ಲಿಸುವ ವಿಧಾನ ಸಂಪೂರ್ಣವಾಗಿ ಉಚಿತವಾಗಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಶುಲ್ಕ ವಿಚಾರ :
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ವೇಳೆ ಸಿಬ್ಬಂದಿಗಳು ಒಂದು ವೇಳೆ ಹಣವನ್ನು ಪಡೆದರೆ ಅದನ್ನು ಕ್ರಿಮಿನಲ್ ಕೇಸ್ ಎಂದು ದಾಖಲಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾರಾದರೂ ಅಸಡ್ಡೆಯನ್ನು ತೋರಿದರೆ ಹಾಗೂ ಜನರಿಂದ ದುಡ್ಡನ್ನು ಪಡೆಯುತ್ತಿದ್ದರೆ ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ ಎಂದು ಗುರುಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಸರ್ಕಾರದಿಂದ 12 ರೂಪಾಯಿಗಳನ್ನು ಪ್ರತಿ ಅರ್ಜಿಗೆ ನೀಡಲಾಗುತ್ತಿದ್ದು ಅಪ್ಲೋಡ್ ಮಾಡಲು ರೂ.10 ಹಾಗೂ ಪ್ರಿಂಟ್ ಔಟ್ ಕೊಡಲು ಎರಡು ರೂಪಾಯಿಗಳನ್ನು ಸರ್ಕಾರವೇ ನೀಡುತ್ತಿದ್ದು, ಈಗಾಗಲೇ ಮೂರು ಜನರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಮಹಿಳೆಯರಿಗೆ ಉಚಿತ ಬಸ್ ಖುಷಿಯ ಬೆನ್ನಲ್ಲೇ ಡ್ರೈವರ್ ಹಾಗೂ ಕಂಡಕ್ಟರ್ ಗಳಿಗೆ ಸಂಬಳ ಏರಿಕೆಯ ಬಿಸಿ
ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವ ಬಗ್ಗೆ ನಿರ್ಧಾರ :
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ಮನೆಯ ಯಜಮಾನಿಗೆ ಸಾವಿರ ರೂಪಾಯಿಗಳನ್ನು ಮುಂದಿನ ತಿಂಗಳೇ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಅದರಂತೆ ಉಚಿತವಾಗಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ ಹಾಗೂ ಗೃಹಲಕ್ಷ್ಮಿ ಯೋಜನೆಯು ಉಚಿತ ನೊಂದಣಿ ಯೋಜನೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಎಲ್ಲಾ ನಿಯಮಗಳನ್ನು ಸಹ ಅರ್ಜಿಯನ್ನು ಪಡೆಯುವವರು ಗಮನಕ್ಕೆ ತೆಗೆದುಕೊಳ್ಳದೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರಿಂದ ಹಣವನ್ನು ಪಡೆಯುತ್ತಿದ್ದರೆ ಅಂತವರ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ಅನ್ನು ವಾಪಸ್ ಪಡೆಯಲು ಸೂಚನೆ ನೀಡಲಾಗಿದೆ ಹಾಗೂ ಅಂತವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ತಹಸೀಲ್ದಾರ್, ಪಿ ಡಿ ಓ ,ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಯಾರೇ ಯಾರಾದರೂ ಸಹ ಯೋಜನೆಗೆ ಅರ್ಜಿ ಸಲ್ಲಿಸಲು ಹಣವನ್ನು ಪಡೆಯುತ್ತಿದ್ದರೆ ಅವರನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಅಸಡ್ಡೆ ಮಾಡುತ್ತಿದ್ದರೆ ಅವರ ಮೇಲು ಸಹ ವನ್ನು ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಒಟ್ಟಾರೆ ಸಂಬಂಧಿಸಿದಂತೆ ಇದುವರೆಗೂ 2290782 ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ. ಭಾನುವಾರ ಅರ್ಜಿಯನ್ನು ಸಲ್ಲಿಸಲು ಸೇವ ಕೇಂದ್ರಗಳಿಗೆ ರಜೆ ಇರುವ ಕಾರಣ ಮತ್ತೆ ಸೋಮವಾರದಿಂದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಸ್ವೀಕರಿಸಲಾಗುತ್ತದೆ.
ಹೀಗೆ ರಾಜ್ಯ ಸರ್ಕಾರದ ಈ ಗೃಹಲಕ್ಷ್ಮಿ ಯೋಜನೆಯ ಒಂದು ರೀತಿಯಲ್ಲಿ ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡುವುದರ ಜೊತೆಗೆ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿ ತಮ್ಮ ದಿನ ನಿತ್ಯದ ಜೀವನವನ್ನು ನಡೆಸಲು ಸಹಕಾರಿಯಾಗಿದೆ ಎಂದು ಹೇಳಬಹುದಾಗಿದೆ. ಈ ಯೋಜನೆಯಲ್ಲಿಯೂ ಸಹ ಕೆಲವೊಂದಿಷ್ಟು ಆಕ್ರಮಗಳನ್ನು ಅಧಿಕಾರಿಗಳು ಮಾಡಲು ಮುಂದಾಗುತ್ತಿದ್ದಾರೆ ಅಂತವರ ವಿರುದ್ಧ ಕಠಿಣ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಸೂಚನೆ ನೀಡುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಸರಿಯಾದ ವ್ಯಕ್ತಿಗಳಿಗೆ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಪ್ರತಿಯೊಬ್ಬರ ಖಾತೆಗೆ ₹2000 ಜಮಾ! ಕೇಂದ್ರ ಸರ್ಕಾರದಿಂದ ಘೋಷಣೆ, ಯಾವ ದಿನ ಬರಲಿದೆ ಗೊತ್ತಾ ?
ಪ್ರತಿಯೊಬ್ಬರ ಖಾತೆಗೆ ₹2000 ಜಮಾ! ಕೇಂದ್ರ ಸರ್ಕಾರದಿಂದ ಘೋಷಣೆ, ಯಾವ ದಿನ ಬರಲಿದೆ ಗೊತ್ತಾ ?