ಹಲೋ ಸ್ನೇಹಿತರೇ, ಇಂದಿನ ಲೇಖನಕ್ಕೆ ಎಲ್ಲರಿಗು ಸ್ವಾಗತ, ರಾಜ್ಯದಲ್ಲಿ ಸಾಕಷ್ಟು ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ, ಮುಂದಿನ 5 ದಿನಗಳಲ್ಲಿ ರಾಜ್ಯದ ಹಲವು ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಮತ್ತು ಇನ್ನು ಹಲವು ಜಿಲ್ಲೆಗಳಲ್ಲಿ ಸಾಧಾರನ ಮಳೆಯಾಗಲಿದೆ ಎಂದು IMD ಮುನ್ಸೂಚನೆ ವರದಿಯನ್ನು ತಿಳಿಸಿದೆ, ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಎಂದು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ.
ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಮತ್ತು ಮುಂದಿನ 5 ದಿನಗಳಲ್ಲಿ ಕರ್ನಾಟಕದ ಒಳನಾಡಿನಲ್ಲು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಮಾನ ಇಲಾಖೆ ಬೆಂಗಳೂರು ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ವಿಜಯನಗರ, ಬಾಗಲಕೋಟೆ, ರಾಯಚೂರು ಬೆಳಗಾವಿ, ಬೆಂಗಳೂರು ಗ್ರಾಮಾಂತರ ನಗರ, ಕೋಲಾರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಹಲವು ಸ್ಥಳಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಬಿರುಗಾಳಿ ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ರೈಲು ಟಿಕೆಟ್ ಪಡೆದ ನಂತರವೂ ಪ್ರಯಾಣಿಕರು ದಂಡ ಪಾವತಿಸಬೇಕು, ಏನಿದು ರೈಲ್ವೆಯ ವಿಶಿಷ್ಟ ನಿಯಮ?
ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು ಮತ್ತು ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು ಕರಾವಳಿಯ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಾಗು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಯಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಮದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿತು.
ಇದೀಗ ಕರಾವಳಿ ಮಾತ್ರವಲ್ಲದೆ. ರಾಜ್ಯಾದ್ಯಂತ ವ್ಯಾಪಕ ಮಳೆಯೆಂದು ತಿಳಿದುಬಂದಿದೆ. ಇಂದು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲುಬುರ್ಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯವಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಟ ಉಷ್ಣಾಂಶ 31 ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಇತರೆ ವಿಷಯಗಳು
ಪ್ರಧಾನ ಮಂತ್ರಿ ಕಿಸಾನ್ ಯೋಜನೆ: 15 ನೇ ಕಂತಿಗೆ ದಿನಾಂಕ ಫಿಕ್ಸ್! ಈ ದಿನ ನಿಮ್ಮ ಖಾತೆಗೆ 2 ಸಾವಿರ
ಹೆಣ್ಣು ಮಗುವಿಗೆ CBSE ಮೆರಿಟ್ ಸ್ಕಾಲರ್ಶಿಪ್ ಯೋಜನೆ.! ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯುವುದು ಹೇಗೆ?