ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿರುವುದರ ಬಗ್ಗೆ. ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 11 ಗಂಟೆಯಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದ್ದು ಸಮಾರಂಭ ನಡೆಯುತ್ತಿದೆ. ಅನೇಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಚಾಲನೆ ನೀಡಿದ ಸಮಯದಿಂದಲೇ ಹಣ ಜಮಾ ಆಗುತ್ತಿದೆ. ಹಾಗಾದರೆ ನಿಮ್ಮ ಖಾತೆಗೂ ಗುರು ಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆಯಾ ಆಗಿರುವುದರ ಬಗ್ಗೆ ಎಸ್ಎಂಎಸ್ ಬಂದಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಿ.
ಗೃಹಲಕ್ಷ್ಮಿ ಯೋಜನೆಗೆ ಚಾಲನೆ :
ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಕಾತುರದಿಂದ ಕಾಯುತ್ತಿದ್ದು ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ರಾಜ್ಯದ ಇತರ ಜಿಲ್ಲೆಗಳಲ್ಲೂ ಅದೇ ರೀತಿಯಾಗಿ ಮಹತ್ವಾಕಾಂಕ್ಷಿ ಯೋಜನೆಯನ್ನು ಸಚಿವರು ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳಲ್ಲಿಯೇ ನಿಮಗೆ ಕೊಟ್ಟಂತಹ ಭರವಸೆಯನ್ನು ಈಡೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ ಹೇಳಿದರು. ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ದಿನಗಳಲ್ಲಿ ಸರ್ಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ವೇಳೆ ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆ :
ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುಂಚೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ನಾವು ಕೊಟ್ಟ ಮಾತನ್ನು ಈಡೇರಿಸಿದ್ದೇವೆ ಎಂದು ಹೇಳಿದ್ದು ಇಂದಿನ ಕಾರ್ಯಕ್ರಮದಲ್ಲಿ ಮನೆ ಯಜಮಾನ ಖಾತೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಹಣ ಸಂದಾಯ ಆಗಿದೆ. ಸಾವಿರ ರೂಪಾಯಿಗಳು ಪ್ರತಿ ತಿಂಗಳು ಮನೆ ಯಜಮಾನರ ಖಾತೆಗೆ ಜಮೆ ಆಗಲಿದೆ. ನಾವು ಹೇಳಿದಂತೆ ರಾಜ್ಯದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಕ್ತಿ ಯೋಜನೆ, ಜಾರಿ ಮಾಡಿದ್ದೇವೆ ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ. ಅದರಂತೆ ಈಗ ಉಚಿತವಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಾಗೂ ಗೃಹಜೋತಿ ಯೋಜನೆಯ 200 ಯೂನಿಟ್ ವಿದ್ಯುತ್ ಸಹ ನೀಡಲಾಗುತ್ತಿದೆ ಅಲ್ಲದೆ ಅನ್ನಭಾಗ್ಯ ಯೋಜನೆಯ 10 ಕೆಜಿ ಅಕ್ಕಿಯನ್ನು ಸಹ ನೀಡಲಾಗುತ್ತಿದೆ ನಾಲ್ಕು ಗ್ಯಾರಂಟಿ ಯೋಜನೆಗಳು ಮಹಿಳೆಯರಿಗಾಗಿ ಮಾಡಿರುವ ಯೋಜನೆಗಳು ಎಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಿದ ನಂತರ ರಾಹುಲ್ ಗಾಂಧಿಯವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆ ಹಣದ ಎಸ್ಎಂಎಸ್ :
ಇಂದು ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಜಿಟಲ್ ಬಟನ್ ಒತ್ತುವುದರ ಮೂಲಕ ಚಾಲನೆಯನ್ನು ನೀಡಲಾಗಿದೆ ಅಲ್ಲದೆ ಮಹಿಳೆಯರ ಬ್ಯಾಂಕ್ ಖಾತೆಗೆ ಇದೇ ಸಮಯದಲ್ಲಿ ಹಣವು ಜಮಾ ಆಗುತ್ತಿದೆ. ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾದ ನಂತರ ಅವರ ಮೊಬೈಲ್ ನಂಬರ್ ಗೆ ಎಸ್ಎಂಎಸ್ ಬರುತ್ತದೆ. ಎಸ್ಎಂಎಸ್ ನಲ್ಲಿ ನಿಮಗೆ ಅಭಿನಂದನೆಗಳು ಎಂದು ತಿಳಿಸಲಾಗುತ್ತದೆ ಅದರಂತೆ ಮುಂದುವರೆದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ ನಂಬರನ್ನು ಸಹ ಆ ಮೆಸೇಜ್ ನಲ್ಲಿ ಅನುಮೋದಿಸಲಾಗಿರುತ್ತದೆ. ಹೀಗೆ ಸರ್ಕಾರದ ವತಿಯಿಂದ ಕಳುಹಿಸಲಾದ ಮೆಸೇಜ್ ಈ ರೀತಿಯಾಗಿ ಬರೆದಿರಲಾಗುತ್ತದೆ.
ಹಣವನ್ನು ಚೆಕ್ ಮಾಡುವ ವಿಧಾನ :
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎಸ್ಎಂಎಸ್ ಮೂಲಕ ನಿಮ್ಮ ಮೊಬೈಲ್ ನಂಬರ್ ಗೆ ಕಳುಹಿಸಲಾಗುತ್ತದೆ ಆದ್ದರಿಂದ ನಿಮ್ಮ ಫೋನಿಗೆ ಗೃಹಲಕ್ಷ್ಮಿ ಯೋಜನೆಯ ಎಸ್ಎಂಎಸ್ ಬರುತ್ತದೆ. ಅದನ್ನು ನೀವು ಚೆಕ್ ಮಾಡಿ ನೋಡಬೇಕಾಗುತ್ತದೆ ಒಂದು ವೇಳೆ ನಿಮಗೆ ಎಸ್ಎಂಎಸ್ ಬರದೆ ಇದ್ದರೆ ನೀವು ಬ್ಯಾಂಕಿಂಗ್ ಮೂಲಕ ಆನ್ಲೈನ್ ನಲ್ಲಿ ಚೆಕ್ ಮಾಡಬಹುದಾಗಿದೆ. ಸಾವಿರ ರೂಪಾಯಿಗಳ ಜಮಾ ಆಗುವುದೇ ಎಂದು ಗೃಹಲಕ್ಷ್ಮಿ ಯೋಜನೆಯ ನೋಂದಣಿ ಸ್ಥಿತಿ ಪರಿಶೀಲನೆ ಮಾಡುವ ಮೂಲಕ ಖಚಿತಪಡಿಸಿಕೊಳ್ಳಬಹುದಾಗಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಹಣವು ಚೆಕ್ ಮಾಡಿಕೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಎಂದರೆ,
https://play.google.com/store/apps/details?id=com.dbtkarnataka ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ನೀವು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ರಾಜ್ಯ ಸರ್ಕಾರದಿಂದ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗಿದ್ದು ನಿಮ್ಮ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಯೋಜನೆಯ ಬಂದಿದ್ಯ ಇಲ್ಲವೇ ಎಂಬುದರ ಬಗ್ಗೆ ಈ ಕೂಡಲೇ ಚೆಕ್ ಮಾಡಿಕೊಳ್ಳಿ.
ಹೀಗೆ ರಾಜ್ಯ ಸರ್ಕಾರವು ತನ್ನ 5 ಗ್ಯಾರಂಟಿ ಯೋಜನೆಗಳಾದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ನೀಡಿದ್ದು ರಾಜ್ಯದ ಮಹಿಳೆಯರು ಸಂತೋಷದಿಂದ ಇದ್ದಾರೆ ಎಂದು ಹೇಳಬಹುದಾಗಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿರುವುದರ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಗೃಹಲಕ್ಷ್ಮಿಗೆ ಸಿಕ್ತು ಭರ್ಜರಿ ಚಾಲನೆ.! ಝಣ ಝಣ ಕಾಂಚಾಣ ಜಮೆಯಾಯ್ತು ಖಾತೆಗೆ.! ಹಣ ಬಂದಿಲ್ಲದವರು ಏನು ಮಾಡಬೇಕು?
ಕೆಲಸಗಾರರ ನಿವೃತ್ತಿ ಅವಧಿಯಲ್ಲಿ ಬಂತು ಹೊಸ ನಿಯಮ ಏನಿರಬಹುದು ಹೊಸ ರೂಲ್ಸ್..?