ನಮಸ್ಕಾರ ಸ್ನೇಹಿತರೆ ನಿಮಗಿದೀಗ ತಿಳಿಸುತ್ತಿರುವುದು ಮತ್ತೊಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಬಗ್ಗೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕವಾಗಿ ದುರ್ಬಲವಾಗಿರುವಂತಹ ಆದಾಯ ವರ್ಗದ ನಾಗರೀಕರ ಜೀವನ ಮಟ್ಟವನ್ನು ಸುಧಾರಿಸುವ ಸಲುವಾಗಿ ಹಲವಾರು ಯೋಜನೆಗಳನ್ನು ಕಾಲಕಾಲಕ್ಕೆ ತರುವ ಪ್ರಯತ್ನ ಮಾಡುತ್ತಿವೆ. ಈ ಯೋಜನೆಗಳಿಂದ ದುರ್ಬಲ ವರ್ಗದ ಜೀವನ ಮಟ್ಟವನ್ನು ಸುಧಾರಿಸಲು ಸಾಧ್ಯವಾಗುತ್ತದೆ ಎಂಬ ಯನ್ನೂ ಹೊಂದಿದೆ. ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೆಲವೊಂದು ಯೋಜನೆಗಳ ಬಗ್ಗೆ ತಿಳಿಸಿದ್ದು ಅಂತಹ ಯೋಜನೆಗಳಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಉಚಿತ ಗ್ಯಾಸ್ ಸಿಲಿಂಡರ್ ಯೋಜನೆಯು ಒಂದಾಗಿದೆ. ಮಹಿಳೆಯರ ಜೀವನವನ್ನು ಸುಧಾರಿಸುವ ಉದ್ದೇಶದಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರಿಗೆ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿದೆ. ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ 2023 :
ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಕಲ್ಯಾಣ ಯೋಜನೆಯಾಗಿದ್ದು, ಇದು ದೇಶದಲ್ಲಿ ಇರುವಂತಹ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ಒದಗಿಸಲು ಸರ್ಕಾರವು ಮುಂದಾಗಿದೆ. ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಲ್ಲದೆ ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಸ್ಟವ್ ಸಹ ನೀಡಲಾಗುತ್ತದೆ. ಈ ಯೋಜನೆಗೆ ಸಂಬಂಧಿಸಿದಂತೆ ಸುಮಾರು 3200 ಗಳ ವರೆಗೆ ವೆಚ್ಚವಾಗುತ್ತದೆ ಎಂದು ಸರ್ಕಾರವು ತಿಳಿಸಿದೆ. ಹಾಗಾಗಿ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ 1600 ರೂಪಾಯಿಗಳನ್ನು ನೀಡಲು ಸಜ್ಜಾಗಿದೆ. ಈ ಸಾಲವನ್ನು ಫಲಾನುಭವಿಗಳು ಬಯಸಿದ್ದಲ್ಲಿ ಕಂತುಗಳಲ್ಲಿ ಪಾವತಿಸಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 : ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದ್ದು, ಈ ಯೋಜನೆಯಡಿಯಲ್ಲಿ ನಾಗರೀಕರಿಗೆ ಪ್ರಯೋಜನಗಳನ್ನು ಒದಗಿಸಲಾಗುತ್ತದೆ.
ಅರ್ಹತೆಗಳು :
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎಂದು ತಿಳಿಸಲಾಗುತ್ತದೆ. ಈ ಕೆಳಗೆ ತಿಳಿಸಿದಂತಹ ಅರ್ಹತೆಗಳನ್ನು ಹೊಂದಿರುವ ನಾಗರಿಕರು ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲು ಯೋಗ್ಯರಾಗಿರುತ್ತಾರೆ. ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರರು ಭಾರತೀಯ ಪ್ರಜೆಗಳಾಗಿರಬೇಕು. ಈ ಯೋಜನೆಗೆ ಸಂಬಂಧಿಸಿದಂತೆ ಇದರ ಪ್ರಯೋಜನವನ್ನು ಮಹಿಳೆಯರು ಮಾತ್ರ ಪಡೆಯುತ್ತಾರೆ. ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ವಯಸ್ಸು 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿರಬೇಕು. ಅಲ್ಲದೆ ಬಡತನ ರೇಖೆಗಿಂತ ಕೆಳಗಿರುವ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇದರ ಜೊತೆಗೆ ಎಲ್ಪಿಜಿ ಸಂಪರ್ಕವನ್ನು ಹೊಂದಿರದ ಕುಟುಂಬಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :
ಭಾರತೀಯ ನಾಗರಿಕರು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಅರ್ಜಿದಾರರ ಆಧಾರ್ ಕಾರ್ಡ್, ಗುರುತಿನ ಚೀಟಿ, ವಿಳಾಸ ಪುರಾವೆ, ಬಿಪಿಎಲ್ ರೇಷನ್ ಕಾರ್ಡ್, ಮೊಬೈಲ್ ನಂಬರ್ ಹಾಗೂ ಪಾಸ್ಪೋರ್ಟ್ ಗಾತ್ರ ಫೋಟೋ.
ಇದನ್ನು ಓದಿ : ಭಾಗ್ಯ ತಂದ ಬಜೆಟ್! ಪ್ರತಿ ಮನೆಗೂ 4 ರಿಂದ 5 ಸಾವಿರ ಹಣ, ಗ್ಯಾರಂಟಿ ಲೆಕ್ಕಾಚಾರ ಹೇಗಿದೆ ಗೊತ್ತಾ?
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಮೊದಲು ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಈ ವೆಬ್ಸೈಟ್ ನಲ್ಲಿ ಕೇಳಿದಂತಹ ಮಾಹಿತಿಗಳನ್ನು ಅರ್ಜಿದಾರರು ಸಂಪೂರ್ಣವಾಗಿ ಭರ್ತಿ ಮಾಡಿದ ನಂತರ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದಂತಾಗುತ್ತದೆ. ಆನ್ಲೈನ್ ಮೂಲಕ ಈ ಅರ್ಜಿಯನ್ನು ಸಲ್ಲಿಸಿದ ನಂತರ ಎಲ್ಪಿಜಿ ಕೇಂದ್ರಕ್ಕೆ ಹೋಗಿ ಈ ಅರ್ಜಿಯನ್ನು ಹಾಗೂ ಅದರ ಜೊತೆಗೆ ನಿಮ್ಮ ದಾಖಲೆಗಳನ್ನು ಸಲ್ಲಿಸಬೇಕು. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಎಂದರೆ www.pmuy.gov.in ಈ ವೆಬ್ಸೈಟ್ನ ಮೂಲಕ ಅರ್ಜಿದಾರರು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕು.
ಹೀಗೆ ಹಿಂದುಳಿದ ಹಾಗೂ ಬಡಜನರ ಆರ್ಥಿಕ ಜೀವನ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ಒಂದಾಗಿದೆ. ಹೀಗೆ ಈ ಯೋಜನೆಯ ಮೂಲಕ ಬಡವರು ಉಚಿತ ಸಿಲಿಂಡರ್ ಜೊತೆಗೆ ಉಚಿತ ಸ್ಟವ್ ಅನ್ನು ಸಹ ಪಡೆಯಬಹುದಾಗಿದೆ. ಈ ಮಾಹಿತಿಯ ಬಗ್ಗೆ ನಿಮ್ಮ ಬಡ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಶೇರ್ ಮಾಡಿ ಅವರು ಸಹ ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಲು ಸಹಕರಿಸಿ ಧನ್ಯವಾದಗಳು.
ಯೋಜನೆಯ ಹೆಸರು ಏನು ?
ಪ್ರಧಾನ ಮಂತ್ರಿ ಉಜ್ವಲ ಯೋಜನೆ
ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ ?
www.pmuy.gov.in
ಅರ್ಜಿದಾರರ ವಯಸ್ಸು ಎಷ್ಟು ಆಗಿರಬೇಕು ?
18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು
ಇದನ್ನು ಓದಿ : ಕರ್ನಾಟಕದ ಬಜೆಟ್ ನಲ್ಲಿ NEP ರದ್ದು ಮಾಡಿದ ಕಾಂಗ್ರೆಸ್ ಸರ್ಕಾರ