ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿಮಗೆ ಶ್ರಮಶಕ್ತಿ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಶ್ರಮಶಕ್ತಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಶ್ರಮಶಕ್ತಿ ಯೋಜನೆ ಅಡಿ 202324ನೇ ಸಾಲಿನಲ್ಲಿ ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿಯನ್ನು ನೀಡುವುದರ ಮೂಲಕ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯ ವೃದ್ಧಿ ಪಡಿಸುವುದಾಗಿದೆ. ಹಾಗಾದರೆ ಈ ಯೋಜನೆ ಅಡಿಯಲ್ಲಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗುತ್ತದೆ.
ಶ್ರಮಶಕ್ತಿ ಯೋಜನೆ :
ಶ್ರಮಶಕ್ತಿ ಯೋಜನೆಯನ್ನು ಅಲ್ಪಸಂಖ್ಯಾತ ವರ್ಗದ ಜನತೆಗಾಗಿ ಜಾರಿಗೆ ತಂದಿದೆ. ಈ ಯೋಜನೆಯ ಅಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಉಲ ಕಸುಬುದಾರರಿಗೆ ತರಬೇತಿ ನೀಡುವುದರ ಮೂಲಕ ಅವರ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಪಡಿಸಿ ಅವರು ಅದೇ ಕಸುಬನ್ನು ಒಂದುವರೆಸಲು ಹಾಗೂ ತಮ್ಮ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಿ ಅದರಲ್ಲಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರವು ಸಾಲ ಸೌಲಭ್ಯವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ಅಲ್ಪಸಮದಾಯಕ್ಕೆ ಸೇರಿದಂತಹ ಕ್ರಿಶ್ಚಿಯನ್, ಮುಸ್ಲಿಂ, ಜೈನರು, ಸಿಕ್ಕರು, ಬೌದ್ಧರು ಮತ್ತು ಪಾರ್ಸಿ ಜನಾಂಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳಿಂದ ಈ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯುವುದಕ್ಕಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು : ಶನಶಕ್ತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದಂತಹ ಮುಸ್ಲಿಂ, ಕ್ರಿಶ್ಚಿಯನ್, ಜೈನರು ,ಬೌದ್ಧರು, ಸಿಕ್ಕರು ಹಾಗೂ ಪಾರ್ಸಿ ಜನಾಂಗದವರಿಗೆ ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ. ಈ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಅರ್ಹ ಅಭ್ಯರ್ಥಿಗಳು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.
ಯೋಜನೆಯ ಅರ್ಹತೆಗಳು :
ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಗುರುತಿಸಲಾಗಿದೆ ಅವುಗಳೆಂದರೆ ರಾಜ್ಯಮತಿಯ ಅಲ್ಪಸಂಖ್ಯಾತ ವರ್ಗಕ್ಕೆ ಅರ್ಜಿದಾರರು ಸೇರಿರಬೇಕು. ಕರ್ನಾಟಕ ರಾಜ್ಯದ ಕಾಯಂ ನಿವಾಸಿ ಆಗಿರಬೇಕು. ಅಜ್ಜಿಯನ್ನು ಸಲ್ಲಿಸಲು ಕನಿಷ್ಠ 18 ರಿಂದ ಗರಿಷ್ಠ 15 ವರ್ಷಗಳ ಒಳಗಾಗಿ ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯವು 3.50 ಲಕ್ಷಕ್ಕಿಂತ ಹೆಚ್ಚಿರಬಾರದು. ಅರ್ಜಿ ಸಲ್ಲಿಸುವ ವಿಧಾನ : ಶ್ರಮ ಶಕ್ತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ. ಅಧಿಕೃತ ವೆಬ್ಸೈಟ್ https://kmdconline.karnataka.gov.in ಈ ವರ್ಷಕ್ಕೆ ಭೇಟಿ ನೀಡುವುದರ ಮೂಲಕ ಸೆಪ್ಟೆಂಬರ್ 25 ರ ಒಳಗಾಗಿ ಶ್ರಮಶಕ್ತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ: ಮಿಸ್ ಕಾಲ್ ಕೊಡಿ ಹಣ ಪಡೆಯಿರಿ
ಹೆಚ್ಚಿನ ಮಾಹಿತಿಗಾಗಿ ಕಚೇರಿ ವಿವರ :
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನೇರವಾಗಿ ಕಚೇರಿಯನ್ನು ಸಂಪರ್ಕಿಸಿ ಅಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ ,ಬೆಂಗಳೂರು ನಗರ ಜಿಲ್ಲೆ ಕೇಂದ್ರೀಯ ವಿಭಾಗ, ಕೊಠಡಿ ಸಂಖ್ಯೆ ಎಫ್ ಎಫ್ -29/37, ಒಂದನೇ ಮಹಡಿ ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಬೆಂಗಳೂರು 02 ಗೆ ಸಂಪರ್ಕಿಸಿ ಅಲ್ಲಿ ಹೆಚ್ಚಿನ ಮಾಹಿತಿಯನ್ನು ಈ ಯೋಜನೆಯ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದರ ಜೊತೆಗೆ ಸಹಾಯವಾಣಿ ಸಂಖ್ಯೆ ಹಾಗೂ ದೂರವಾಣಿ ಸಂಖ್ಯೆಯನ್ನು ಸಹ ನೀಡಲಾಗುತ್ತಿದೆ. ಸಹಾಯವಾಣಿ ಸಂಖ್ಯೆ ಎಂದರೆ 080-8277799990, ದೂರವಾಣಿ ಸಂಖ್ಯೆ 080-22114815 ಈ ಸಂಖ್ಯೆಗಳಿಗೆ ಕರೆ ಮಾಡುವುದರ ಮೂಲಕ ಶ್ರಮಶಕ್ತಿ ಯೋಜನೆಯ ಹೆಚ್ಚಿನ ಮಾಹಿತಿಯನ್ನು ಅರ್ಹ ಅಭ್ಯರ್ಥಿಗಳು ಪಡೆಯಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ವಿಭಾಗಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದ್ದು ಅಲ್ಪಸಂಖ್ಯಾತರ ಅಭಿವೃದ್ಧಿಯು ಸಹ ರಾಜ್ಯ ಸರ್ಕಾರದ ಒಂದು ಕೆಲಸವಾಗಿದೆ ಎಂದು ಹೇಳಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಅಥವಾ ಸಂಬಂಧಿಕರಲ್ಲಿ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿಗಳಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಅವರು ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಕಿಸಾನ್ ಯೋಜನೆಯ ಹಣ 6,000 ಬದಲಾಗಿ ಇನ್ನು ಮುಂದೆ 9,000 ಕೂಡಲೇ ಲಿಂಕ್ ನಲ್ಲಿ ರಿಜಿಸ್ಟರ್ ಮಾಡಿ
ಜಿಯೋ ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ : ಡಿಸೆಂಬರ್ 31ರವರೆಗೂ ಡೇಟಾ ಕರೆನ್ಸಿ ಉಚಿತ