ನಮಸ್ಕಾರ ಸ್ನೇಹಿತರೇ ಐದು ಗ್ಯಾರೆಂಟಿ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಮಹತ್ವದ ಒಂದು ಯೋಜನೆ ಎಂದರೆ ಅದು ಶಕ್ತಿ ಯೋಜನೆ ಯಾಗಿದ್ದು ಈ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ನಾಡಿನಾದ್ಯಂತ ಸಿಗುತ್ತಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಯೋಜನವನ್ನು ರಾಜ್ಯದ ಸಾವಿರಾರು ಮಹಿಳೆಯರು ಪ್ರತಿನಿತ್ಯ ಹೇಳುತ್ತಿದ್ದಾರೆ ಅದರಂತೆ ಈಗ ಮತ್ತೊಂದು ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರವು ಮಹಿಳೆಯರಿಗೆ ನೀಡಲು ನಿರ್ಧರಿಸಿದೆ.
ಸರ್ಕಾರದ ಮಹತ್ವದ ನಿರ್ಣಯ :
ರಾಜ್ಯ ಸರ್ಕಾರವು ಮಹಿಳೆಯರಿಗೆ ಶಕ್ತಿ ಯೋಜನೆಯ ನಂತರ ಮತ್ತೊಂದು ಯೋಜನೆಯನ್ನು ಜಾರಿಗೊಳಿಸಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರವನ್ನು ಕೈಗೊಂಡಿದೆ. ಮಹಿಳೆಯರು ಉಚಿತ ಬಸ್ ಯೋಜನೆಯ ಅಡಿಯಲ್ಲಿ ಪ್ರತಿ ನಿತ್ಯವೂ ಸಹ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರವು ಈಗ ಕ್ಯಾಬಿನೆಟ್ ಸಭೆಯಲ್ಲಿ ಕ್ಯಾನಿಕರ್ ಬಟನ್ ಹಾಗೂ ವಾಹನ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಸರ್ಕಾರಿ ಬಸ್ಸುಗಳಲ್ಲಿ ಅಳವಡಿಸಲು ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ.
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಟ್ರ್ಯಾಕಿಂಗ್ ಹಾಗೂ ಪ್ಲಾನಿಂಗ್ ಬಟನ್ ವ್ಯವಸ್ಥೆ :
ರಾಜ್ಯ ಸರ್ಕಾರವು ಸುಮಾರು 30.74 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆಎಸ್ಆರ್ಟಿಸಿ ಬಸ್ ಗಳಿಗೆ ಸೇರಿದಂತೆ ಸರ್ಕಾರಿ ಸಾರಿಗೆ ವಾಹನಗಳನ್ನು ಅಳವಡಿಸಲು ಕ್ಯಾಬಿನೆಟ್ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆಗೆ ಸಂಪುಟವು ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಕಾನೂನು ಸಚಿವರಾದ ಎಚ್ ಕೆ ಪಾಟೀಲ್ ರವರು ತಿಳಿಸಿದ್ದು, ಈ ವ್ಯವಸ್ಥೆಯನ್ನು ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಮಹಿಳೆಯರು ಬಸ್ಗಾಗಿ ಕಾಯುತ್ತಿದ್ದರೆ ಅವರ ಸಮಯವನ್ನು ಕಡಿಮೆ ಮಾಡಲು ಹಾಗೂ ಕೆಎಸ್ಆರ್ಟಿಸಿ ಪ್ರಯಾಣದ ಉತ್ತಮ ಅನುಭವವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸರ್ಕಾರಿ ಬಸ್ಗಳಲ್ಲಿ ಹಾಗೂ ವೆಹಿಕಲ್ ಗಳಲ್ಲಿ ಪ್ರತ್ಯೇಕ ಕೇಂದ್ರ ನಿಯಂತ್ರಣ ಕೊಠಡಿಯೊಂದಿಗೆ ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಮ್ ಮತ್ತು ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಅಳವಡಿಸಲು ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕಾನೂನು ಸಚಿವರಾದ ಎಚ್ ಕೆ ಪಾಟೀಲ್ ರವರು ತಿಳಿಸಿದರು.
ಕ್ಯಾಬಿನೆಟ್ ಸಭೆಯಲ್ಲಿ 16 ವಿಷಯಗಳ ಚರ್ಚೆ :
ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸುಮಾರು 16 ವಿಷಯಗಳ ಬಗ್ಗೆ ಚರ್ಚಿಸಲಾಗಿದ್ದು ಅದರಲ್ಲಿ 16 ವಿಷಯಗಳಲ್ಲಿ 15 ಕ್ಕೆ ಸಚಿವ ಸಂಪುಟವು ಗ್ರೀನ್ ಸಿಗ್ನಲ್ ಅನ್ನು ನೀಡಿದ್ದು ಒಂದನ್ನು ಮುಂದಿಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ ಹಾಗು ವಾಹನಗಳಲ್ಲಿ ಟ್ರ್ಯಾಕಿಂಗ್ ವ್ಯವಸ್ಥೆ ಮತ್ತು ಪ್ಯಾನಿಕ್ ವ್ಯವಸ್ಥೆಯನ್ನು ಪರಿಚಯಿಸುವ ಮೂಲಕ ಪ್ರಯಾಣಿಕರಿಗೆ ಅವರು ಎಲ್ಲಿದ್ದಾರೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗೂ ಬಸ್ ಗಳಿಗಾಗಿ ಕಾಯುತ್ತಿರುವಂತಹ ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ಈ ಯೋಜನೆಯ ಅಡಿಯಲ್ಲಿ ಪ್ರಯಾಣಿಕರನ್ನು ರಕ್ಷಿಸಲಾಗುತ್ತದೆ ಹಾಗೂ ಈ ಯೋಜನೆಗೆ ಸುಮಾರು 34 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ ಎಂದು ಕಾನೂನು ಸಚಿವರು ತಿಳಿಸಿದರು.
ಹೀಗೆ ರಾಜ್ಯ ಸರ್ಕಾರವು ಕೆಎಸ್ಆರ್ಟಿಸಿ ಬಸ್ ಗಳಿಗೆ ಸಂಬಂಧಿಸಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಅದರಂತೆ ಈಗ ಮತ್ತೊಂದು ಸೌಲಭ್ಯವನ್ನು ನೀಡುವುದರ ಮೂಲಕ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ. ಹೀಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಇಂತಹ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ ಎಂಬುದರ ಬಗ್ಗೆ ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಹೆಚ್ಚಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.