ನಮಸ್ಕಾರ ಸ್ನೇಹಿತರೇ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯನ್ನು ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಈಗ ವಿದ್ಯಾರ್ಥಿಗಳಿಗೋಸ್ಕರ ಸ್ಕಾಲರ್ಶಿಪ್ ಅನ್ನು ಆರಂಭಿಸಲು ನಿರ್ಧರಿಸಿದೆ. ಆದರೆ ಈ ಸ್ಕಾಲರ್ಶಿಪ್ ಮೂರು ವರ್ಷಗಳ ಹಿಂದೆ ಕ್ಯಾನ್ಸಲ್ ಆಗಿತ್ತು. ಆದರೆ ಇದೀಗ ಮತ್ತೆ ಪುನರ್ ಆರಂಭಿಸಲು ರಾಜ್ಯ ಸರ್ಕಾರ ಯೋಚಿಸಿದೆ. ಇಸ್ಕಾಲರ್ಶಿಪ್ನ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಅವರ ಬ್ಯಾಂಕ್ ಖಾತೆಗೆ 15000 ಹಣ ನೇರವಾಗಿ ಜಮಾ ಆಗಲಿದೆ. ಹಾಗಾದರೆ ಈ ಸ್ಕಾಲರ್ಶಿಪ್ ಏನು ಸ್ಕಾಲರ್ಶಿಪ್ಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಸ್ಕಾಲರ್ಶಿಪ್ ಗೆ ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.
ವಿದ್ಯಾಸಿರಿ ಸ್ಕಾಲರ್ಶಿಪ್ :
ಮೂರು ವರ್ಷಗಳ ಹಿಂದೆ ಕ್ಯಾನ್ಸಲ್ ಆಗಿದ್ದ ವಿದ್ಯಾಸಿರಿ ಸ್ಕಾಲರ್ಶಿಪ್ ಅನ್ನು ರಾಜ್ಯ ಸರ್ಕಾರ ಈಗ ಪುನರ್ ಆರಂಭಿಸಲು ನಿರ್ಧರಿಸಿದೆ. ವಿದ್ಯಾಸಿರಿ ಫುಡ್ ಅಂಡ್ ಅಕಮಡೇಶನ್ ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದವರಿಗೆ ಅಭ್ಯರ್ಥಿಗಳಿಗೆ ನೇರವಾಗಿ ಹದಿನೈದು ಸಾವಿರ ರೂಪಾಯಿಗಳ ಹಣ ಜಮಾ ಆಗಲಿದೆ. ಈ ಸ್ಕಾಲರ್ಶಿಪ್ನ ಅಡಿಯಲ್ಲಿ 1500 ರೂಪಾಯಿಗಳಂತೆ ತಿಂಗಳಿಗೆ 15000ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿದ್ಯಾಸಿರಿ ಸ್ಕಾಲರ್ಶಿಪ್ನ ಅರ್ಹತೆಗಳು :
ವಿದ್ಯಾಸಿರಿ ಸ್ಕಾಲರ್ಶಿಪ್ ಅನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. ಸರ್ಕಾರಿ ಅಥವಾ ಅನುದಾನಿತ ವಿದ್ಯಾರ್ಥಿ ನಿಲಯ ಅಥವಾ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ನೀಡಲಾಗುತ್ತದೆ. ಈ ಯೋಜನೆಯಡಿಯಲ್ಲಿ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ೧೫೦೦ ರೂಪಾಯಿಗಳನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತಿದ್ದು ಶೈಕ್ಷಣಿಕ ಅವಧಿಯಲ್ಲಿ 10 ತಿಂಗಳಿಗೆ ಪ್ರತಿ ವರ್ಷ ಹುಟ್ಟು ಹದಿನೈದು ಸಾವಿರ ರೂಪಾಯಿಗಳ ಸಹಾಯಧನವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಕುಟುಂಬದ ವಾರ್ಷಿಕ ಆದಾಯವು ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು. ವಿದ್ಯಾರ್ಥಿಯು ಶೇಕಡಾ 75ರಷ್ಟು ತರಗತಿಗೆ ಹಾಜರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ವಿದ್ಯಾರ್ಥಿಗಳು ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ರಾಜ್ಯ ಸರ್ಕಾರದ ಎಸ್ ಎಸ್ ಪಿ ಪೋರ್ಟಲ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.
ಅಗತ್ಯವಿರುವ ದಾಖಲೆಗಳು :
ವಿದ್ಯಾರ್ಥಿಗಳು ವಿದ್ಯಾಸಿರಿ ್ಕಾಲರ್ಶಿಪ್ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ,ಜಾತಿ ಪ್ರಮಾಣ ಪತ್ರ ,ಆದಾಯ ಪ್ರಮಾಣ ಪತ್ರ ,ಹಿಂದಿನ ವರ್ಷದ ಅಂಕಪಟ್ಟಿ , ಬ್ಯಾಂಕ್ ಖಾತೆಯಲ್ಲಿನ ಸಂಖ್ಯೆ ಹಾಗೂ ಐಎಫ್ಎಸ್ಸಿ ಕೋಡ್ ಜೊತೆಗೆ ವಿದ್ಯಾರ್ಥಿಗಳು ನಿಗದಿತ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
ಹೀಗೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಹಾಗೂ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಸಲುವಾಗಿ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಪುನರ್ ಆರಂಭಿಸಲು ನಿರ್ಧರಿಸಿದೆ. ಇದರಿಂದ ವಿದ್ಯಾರ್ಥಿಗಳು ತಮಗೆ ಬೇಕಾದಂತಹ ಶೈಕ್ಷಣಿಕ ವರ್ಷದ ಅಗತ್ಯ ವಸ್ತುಗಳನ್ನು ವಿದ್ಯಾಸಿರಿ ವಿದ್ಯಾರ್ಥಿವೇತನ ಪಡೆಯುವುದರ ಮೂಲಕ ತಾವೇ ತಮ್ಮ ಖರ್ಚನ್ನು ನೋಡಿಕೊಳ್ಳಲು ಸಹಾಯವಾಗುತ್ತದೆ. ಈ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಬಗ್ಗೆ ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವುದರ ಮೂಲಕ ಅವರ ಮಕ್ಕಳು ಯಾರಾದ್ರೂ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅವರು ಈ ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆಯಲು ಸಹಾಯ ಮಾಡಿ ಧನ್ಯವಾದಗಳು.