ನಮಸ್ಕಾರ ಸ್ನೇಹಿತರೇ , ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಸಹ ಒಂದಾಗಿದೆ. ಲಕ್ಷಾಂತರ ಮಹಿಳೆಯರಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಜಾರಿಗೆ ಬಂದಿದ್ದು ನೇರವಾಗಿ ಅವರ ಖಾತೆಗೆ ಹಣವನ್ನು ರಾಜ್ಯ ಸರ್ಕಾರವು ಜಮಾ ಮಾಡಿದೆ. ಆದರೆ ವಿವಿಧ ರೀತಿಯ ಸಮಸ್ಯೆಗಳು ಇನ್ನೂ ಅನೇಕ ಮಹಿಳೆಯರು ಎದುರಿಸುತ್ತಿದ್ದಾರೆ. ಹಾಗಾದರೆ ಆ ಸಮಸ್ಯೆಗಳು ಏನು, ಯಾವಾಗ ಅವರಿಗೆ ಹಣ ಬರುತ್ತದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆ ಜಾರಿ :
ರಾಜ್ಯ ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೂ ಸಹ ಕೆಲವೊಂದಿಷ್ಟು ಮಹಿಳೆಯರು ಗೃಹಲಕ್ಷ್ಮಿಯ ಹಣ ಇನ್ನು ಸಂದಾಯವಾಗಿಲ್ಲ ಎಂದು ಹೇಳುತ್ತಿದ್ದು ಹಲವರಲ್ಲಿ ಈ ಕಾರಣದಿಂದಾಗಿ ಗೊಂದಲ ಮೂಡಿದೆ. ಇದರ ನಡುವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಣ ಸಂದಾಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲಿಯೇ ಗೃಹಲಕ್ಷ್ಮಿ ಯೋಜನೆಯ ಹಣವು ಸಂದಾಯವಾಗದ ಖಾತೆಗೆ ಜಮಾ ಆಗುತ್ತದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೆಸೇಜ್ : ನಿಧಾನವಾಗಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದಾಗಿನಿಂದ ಸಹ ಹಣ ಸಂದಾಯ ಆಗುತ್ತಿದೆ. ಈಗಾಗಲೇ ಕೆಲವೊಂದು ಇಷ್ಟು ಮಹಿಳೆಯರು ಮೆಸೇಜ್ ಬಂದಿದ್ದರೂ ಸಹ ಗೃಹಲಕ್ಷ್ಮಿ ಯೋಜನೆಯ ಹಣವು ಖಾತೆಗೆ ಬಂದಿಲ್ಲ ಎಂದು ತಮ್ಮ ಸಮಸ್ಯೆಯನ್ನು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿರುವುದಿಲ್ಲ :
ರಾಜ್ಯದಲ್ಲಿರುವ ಎಲ್ಲ ಜಿಲ್ಲೆಗಳಲ್ಲಿ ವಾಸ್ತವವಾಗಿ ಗೃಹಲಕ್ಷ್ಮಿ ಯೋಜನೆಗೆ ಸಂದಾಯ ಮಾಡಬೇಕಾದ ಹಣವನ್ನು ರಾಜ್ಯ ಸರ್ಕಾರವು ಡಿಬಿಟಿ ಮೂಲಕ ಬಿಡುಗಡೆ ಮಾಡಿದೆ. ಈಗಾಗಲೇ ಸರ್ಕಾರವು ಬರೋಬ್ಬರಿ ಎರಡು ತಿಂಗಳಿಗೆ ನೀಡಬೇಕಾದ ಹಣವನ್ನು ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ ರಾಜ್ಯದಲ್ಲಿರುವ ಎಲ್ಲ ಜಿಲ್ಲೆಗಳಲ್ಲಿ ಡಿಬಿಟಿ ಮೂಲಕ ಹಣವನ್ನು ಬಿಡುಗಡೆ ಮಾಡಿದ್ದರು ಸಹ ಕೆಲವೊಂದಿಷ್ಟು ಮಹಿಳೆಯರಿಗೆ ಈ ಹಣ ತಲುಪಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ನೇರ ನಗದು ಹಣವನ್ನು ವರ್ಗಾವಣೆ ೂಲಕ ಮೊದಲ ಬಾರಿಗೆ ಇದು ರಾಜ್ಯದಲ್ಲಿ ಜಾರಿಯಾಗುತ್ತಿದ್ದು ಹಂತ ಹಂತವಾಗಿ ಇದಕ್ಕೆ ಆರ್ಬಿಐ ಹಣ ವರ್ಗಾವಣೆ ಮಾಡಬೇಕು. ಹಾಗಾಗಿ ಇದರ ಪರಿಣಾಮವಾಗಿ ಗೃಹಲಕ್ಷ್ಮಿ ಯೋಜನೆಯ ಹಣವು ಮೊದಲ ತಿಂಗಳು ಮಾತ್ರ ತಡ ಆಗಬಹುದು ಎಂದು ತಿಳಿಸಿದ್ದಾರೆ.
ಇದನ್ನು ಓದಿ : ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ವಿದ್ಯಾರ್ಥಿವೇತನ : ಯಾರು ಮಿಸ್ ಮಾಡ್ಕೋಬೇಡಿ ಅರ್ಜಿ ಹಾಕಿ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳು :
ಗೃಹಲಕ್ಷ್ಮಿ ಯೋಜನೆಗೆ ಒಂದು ಪಾಯಿಂಟ್ 20 ಕೋಟಿ ಅರ್ಜಿಗಳಲ್ಲಿ ಸುಮಾರು 63,00,000 ಖಾತೆಗೆ ರಾಜ್ಯ ಸರ್ಕಾರವು ಈಗಾಗಲೇ ಹಣವನ್ನು ಸಂದಾಯ ಮಾಡಿದೆ. ಇನ್ನುಳಿದಂತಹ ಶೇಕಡಾ 45 ಅರ್ಜಿಗಳಿಗೆ ಹಣ ಸಂದಾಯ ವಾಗುವಂತಹ ಪ್ರಕ್ರಿಯೆಯು ರಾಜ್ಯದಲ್ಲಿ ನಡೆಯುತ್ತಿದ್ದು ಎರಡನೇ ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣದ ಸಮಸ್ಯೆಯು ಇರುವುದಿಲ್ಲ. ಇದರ ಜೊತೆಗೆ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಗಳ ಬದಲಾವಣೆಗೂ ಸಹ ಅನುಮತಿಯನ್ನು ನೀಡಲಾಗಿದ್ದು ಅವರು ಸಹ ರೇಷನ್ ಕಾರ್ಡ್ ಬದಲಾವಣೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. 15ನೇ ತಾರೀಖಿನ ಒಳಗಾಗಿ ಮುಂದಿನ ತಿಂಗಳಿನಿಂದ ಗೃಹಲಕ್ಷ್ಮಿಯ ಹಣವು ಸಂದಾಯ ಆಗಲಿದೆ ಎಂದು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ಸಚಿವರು ತಿಳಿಸಿದ್ದಾರೆ.
ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿಯ ಸ್ಟೇಟಸ್ ನಲ್ಲಿ ಅರ್ಜಿ ಸಲ್ಲಿಕೆ ಆಗಿಲ್ಲ ಎಂದು ನಿಮಗೆ ತಿಳಿದು ಬಂದರೆ ನೀವು ಸ್ಥಳೀಯರು ಅಂಗನವಾಡಿ ಕಾರ್ಯಕರ್ತರ ನೆರವು ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಅಲ್ಲದೆ ತಾಲೂಕು ಮಟ್ಟದಲ್ಲಿ ಮಹಿಳಾ ಕಲ್ಯಾಣ ಇಲಾಖೆ ಸಿಡಿಟಿಓ ಅಧಿಕಾರಿ ಯನ್ನು ಸಹ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಹಣವು ಈ ತಿಂಗಳಲ್ಲಿ ನಿಧಾನವಾಗಿ ಜಮಾ ಆಗುತ್ತಿದ್ದು ಮಹಿಳೆಯರು ಆತಂಕ ಪಡುವ ಅಗತ್ಯವಿಲ್ಲ ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಹೆಣ್ಣು ಮಗು ಹುಟ್ಟಿದರೆ ಸಿಗುತ್ತೆ ₹50,000! ಈ ರೀತಿಯಾಗಿ ಅಪ್ಲೇ ಮಾಡಿದರೆ ಸಿಗಲಿದೆ ಸಂಪೂರ್ಣ ಲಾಭ
ಸರ್ಕಾರ ನೀಡುತ್ತಿದೆ ಉಚಿತ ಸ್ಕೂಟಿ..! ಈ ಯೋಜನೆಯ ಲಾಭ ಯಾರಿಗೆಲ್ಲಾ ಸಿಗಲಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ